Home namma chikmagalur chikamagalur ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನಾಭರಣ ಕಳ್ಳತನ
chikamagalurCrime NewsHomeLatest Newsnamma chikmagalur

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನಾಭರಣ ಕಳ್ಳತನ

Share
Share

ಚಿಕ್ಕಮಗಳೂರು: ಕೆ.ಎಂ. ರಸ್ತೆಯ ಕತ್ರಿಮಾರಮ್ಮ ದೇವಸ್ಥಾನದ ಸಮೀಪವಿರುವ ಬಸ್ ನಿಲ್ದಾಣದಿಂದ ಸಖರಾಯಪಟ್ಟಣಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗಿನಿಂದ ಸುಮಾರು 10,64,000 ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ.

ದೂರುದಾರೆ ಮಹಿಳೆಯು ಫೆ. 25ರಂದು ಮಧ್ಯಾಹ್ನ 2:45 ರಿಂದ 3:00 ಗಂಟೆಯ ಸುಮಾರಿಗೆ ಬಸ್ ಹತ್ತಿದಾಗ ತಮ್ಮ ಬ್ಯಾಗಿನಲ್ಲಿದ್ದ ಒಡವೆಗಳನ್ನು ಖಚಿತಪಡಿಸಿಕೊಂಡು, ಜಿಪ್ ಹಾಕಿ ಬ್ಯಾಗನ್ನು ತೊಡೆಯ ಮೇಲೆ ಇಟ್ಟುಕೊಂಡು ಪ್ರಯಾಣಿಸಿದ್ದರು.

ಸಖರಾಯಪಟ್ಟಣದಲ್ಲಿ ಬಸ್ ಇಳಿದು ಗಮನಿಸಿದಾಗ ಬ್ಯಾಗಿನ ಜಿಪ್ ತೆರೆದಿರುವುದು ಕಂಡುಬಂದಿದೆ. ಆತಂಕಗೊಂಡ ಮಹಿಳೆಯು ಬಸ್ ನಿಲ್ದಾಣದಲ್ಲಿ ಪರಿಶೀಲಿಸದೆ, ನೇರವಾಗಿ ತಮ್ಮ ಸೊಸೆಯ ಅಕ್ಕನ ಮನೆಗೆ ತೆರಳಿ ಬ್ಯಾಗ್‌ ಪರೀಕ್ಷಿಸಿದಾಗ ಒಳಗೆ ಇಟ್ಟಿದ್ದ ಒಡವೆ ಬಾಕ್ಸ್ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

ಸುಮಾರು 40 ಗ್ರಾಂ ತೂಕದ ಎರಡು ಬಳೆಗಳು (໑໐໙໙ 230 5,32,000 ) ಸುಮಾರು 35 ಗ್ರಾಂ ತೂಕದ ಒಂದು ನೆಕ್ಸಸ್ (ಅಂದಾಜು ಬೆಲೆ 4,65,500 ರೂ.) 5 ಗ್ರಾಂ ತೂಕದ ಒಂದು ಜೊತೆ ಓಲೆಗಳು (ಅಂದಾಜು ಬೆಲೆ 66,500 ರೂ.) ಒಟ್ಟು 80 ಗ್ರಾಂ ತೂಕದ, 10,64,000 ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಪತ್ತೆಹಚ್ಚಿಕೊಡುವಂತೆ ಮಹಿಳೆಯು ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Woman’s jewellery stolen while travelling in KSRTC bus

Share

Leave a comment

Leave a Reply

Your email address will not be published. Required fields are marked *

Don't Miss

ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರ ಬಂಧನ

ಚಿಕ್ಕಮಗಳೂರು : ಮನುಷ್ಯತ್ವಕ್ಕೆ ಮಸಿ ಬಳಿಯುವಂತೆ ವೃದ್ಧ ರೈತರೊಬ್ಬರ ಮೇಲೆ ಹಲ್ಲೆ ನಡೆಸಿ ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರನ್ನು ಚಿಕ್ಕಮಗಳೂರು ನಗರ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕುರಿಚಿಕ್ಕನಹಳ್ಳಿಯ ನಿಂಗೇಗೌಡ...

ಹೋಂ ಸ್ಟೇ’ನಲ್ಲಿ ಯುವತಿ ಸಾವು-ಮಾಲೀಕ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು : ತಾಲೂಕಿನ ಹಾಂದಿ ಗ್ರಾಮದ ‘ಹಿಪ್ಲಾ ಹೋಂ ಸ್ಟೇ’ನಲ್ಲಿ ನಡೆದಿದ್ದ ಯುವತಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ಕು ತಿಂಗಳ ಬಳಿಕ ಮಾಲೀಕ ಸುಧಾಕರ್ ವಿರುದ್ಧ ಅಲ್ಲೂರು ಪೊಲೀಸ್ ಠಾಣೆಯಲ್ಲಿ...

Related Articles

ಇಂದಿನಿಂದ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ

ಚಿಕ್ಕಮಗಳೂರು : ಶನಿವಾರದಿಂದ ರಾಜ್ಯಾದ್ಯಂತ 2025 26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು ಇದಕ್ಕೆ...

ಸಾವಿನ ಹೆಣ ಇಟ್ಟುಕೊಂಡು ಕೀಳು ಮಟ್ಟದ ರಾಜಕೀಯ

ಚಿಕ್ಕಮಗಳೂರು: ಇತ್ತೀಚೆಗೆ ನಡೆದ ಆನೆ ದಾಳಿಯಿಂದಾದ ಸಾವು ಮತ್ತು ಅದರ ಸುತ್ತ ನಡೆಯುತ್ತಿರುವ ಬೆಳವಣಿಗೆಗಳ ಕುರಿತು...

ವೃದ್ಧ ಮಹಿಳೆಯೊಬ್ಬರ ಚಿನ್ನದ ಸರ ಕಳವು

ಚಿಕ್ಕಮಗಳೂರು: ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಯುವಿಹಾರಕ್ಕೆ ತೆರಳಿದ್ದ ವೃದ್ಧ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ, ಹಲ್ಲೆ ನಡೆಸಿ...

ಶೃಂಗೇರಿಯಲ್ಲಿ ಮದುವೆ ಮಂಟಪದಲ್ಲೇ ಮುರಿದುಬಿದ್ದ ಮದುವೆ

ಶೃಂಗೇರಿ: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದ ಈಡಿಗ ಸಮುದಾಯದ ಭವನದಲ್ಲಿ ನಡೆಯಬೇಕಿದ್ದ ವಿವಾಹವೊಂದು ಮದುವೆ ಮಂಟಪದಲ್ಲೇ...