Home namma chikmagalur chikamagalur ಮಹಿಳೆಯರು ಧರಿಸುವ ‘ನೈಟಿ’ ಧರಸಿ ದೇವಸ್ಥಾನದಲ್ಲಿ ಕಳ್ಳತನ
chikamagalurHomeLatest Newsnamma chikmagalur

ಮಹಿಳೆಯರು ಧರಿಸುವ ‘ನೈಟಿ’ ಧರಸಿ ದೇವಸ್ಥಾನದಲ್ಲಿ ಕಳ್ಳತನ

Share
Share

ಚಿಕ್ಕಮಗಳೂರು:  ದೇವಸ್ಥಾನಗಳಲ್ಲಿ ಕಳ್ಳತನ ನಡೆಯುವುದು ಹೊಸದೇನಲ್ಲ. ಆದರೆ, ಪತ್ತೆಯಾಗಬಾರದು ಎಂದು ಕಳ್ಳರು ಹೂಡುವ ತಂತ್ರಗಳು ಮಾತ್ರ ಪೊಲೀಸರಿಗಷ್ಟೇ ಅಲ್ಲದೆ ಸಾರ್ವಜನಿಕರಿಗೂ ಅಚ್ಚರಿ ಮೂಡಿಸುತ್ತವೆ. ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂತಹುದೇ ಒಂದು ವಿಚಿತ್ರ ಹಾಗೂ ಕತರ್ ನಾಕ್ ಕಳ್ಳತನ ಘಟನೆ ನಡೆದಿದ್ದು, ಕಳ್ಳನ ನೈಟಿ ಜಿಮಿಕ್ ಕಂಡು ಗ್ರಾಮಸ್ಥರು ಮತ್ತು ಪೊಲೀಸರು ಬೆಚ್ಚಿಬಿದ್ದಿದ್ದಾರೆ!

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಜಲ್ಲದೀಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಪ್ರಸಿದ್ಧ ಶಂಕರಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಮಧ್ಯರಾತ್ರಿ ನುಗ್ಗಿದ ಕಳ್ಳ, ದೇವರ ಹುಂಡಿಗೆ ಕನ್ನ ಹಾಕಿದ್ದಾನೆ. ಆದರೆ, ಇಲ್ಲಿ ವಿಶೇಷ ಏನೆಂದರೆ ತನ್ನ ಗುರುತು ಸಿಗಬಾರದು ಎಂಬ ಕಾರಣಕ್ಕೆ ಈತ ಮಹಿಳೆಯರು ಧರಿಸುವ ‘ನೈಟಿ’  ತೊಟ್ಟು ಬಂದಿದ್ದನು!

ಮೊನ್ನೆ ಮಧ್ಯರಾತ್ರಿ ಸುಮಾರು 1:45 ರ ವೇಳೆಗೆ ದೇವಸ್ಥಾನದ ಆವರಣಕ್ಕೆ ನುಗ್ಗಿದ ಈ ಖದೀಮ, ಮೈ ಮೇಲೆಲ್ಲಾ ಹೊದಿಕೆ ಹಾಕ್ಕೊಂಡು ಅತಿ ಚಾಣಾಕ್ಷತನದಿಂದ ಹುಂಡಿಯಲ್ಲಿದ್ದ ಹಣವನ್ನು ಕದ್ದಿದ್ದಾನೆ. ಹುಂಡಿಯಲ್ಲಿದ್ದ ಕಾಗದದ ನೋಟುಗಳನ್ನು ಮಾತ್ರ ಕಳವು ಮಾಡಿ, ಚಿಲ್ಲರೆ ನಾಣ್ಯಗಳನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

ಕಳ್ಳತನದ ಸಂಪೂರ್ಣ ದೃಶ್ಯಾವಳಿಗಳು ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ನೈಟಿ ಧರಿಸಿ, ಮುಖ ಮುಚ್ಚಿಕೊಂಡು ಹುಂಡಿ ಒಡೆಯುವ ಕಳ್ಳನ ಕೃತ್ಯ ಈಗ ವೈರಲ್ ಆಗಿದೆ. ಬೆಳಿಗ್ಗೆ ದೇವಸ್ಥಾನಕ್ಕೆ ಬಂದ ಅರ್ಚಕರು ಹಾಗೂ ಸ್ಥಳೀಯರು ಹುಂಡಿ ಒಡೆದಿರುವುದನ್ನು ನೋಡಿ ತಕ್ಷಣ ಅಜ್ಜಂಪುರ ಪೊಲೀಸ್ ಠಾಣೆಗೆ

ಜಲದಿಹಳ್ಳಿ ಗ್ರಾಮಸ್ಥರ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಅಜ್ಜಂಪುರ ಪೊಲೀಸರು, ಸಿಸಿಟಿವಿ ಫೂಟೇಜ್ (CCTV Footage) ಆಧರಿಸಿ ಈ ಕತರ್ ನಾಕ್ ‘ನೈಟಿ ಕಳ್ಳ’ನ ಪತ್ತೆಗಾಗಿ ಬಲೆ ಬೀಸಿದ್ದಾರೆ.

Women’s ‘nightie’ stole from temple

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ಜಿಲ್ಲೆಯ ಯಾರಿಗೂ ಸಚಿವ ಸ್ಥಾನವಿಲ್ಲ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಯಾವ ಶಾಸಕರಿಗೂ ಮಂತ್ರಿ ಸ್ಥಾನ ಸಿಗುವುದಿಲ್ಲ ಎಂದು ಖಚಿತ ಮಾಹಿತಿ ಇದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ನ ಐದು ಶಾಸಕರಿದ್ದು ಇಬ್ಬರು ವಿಧಾನ ಪರಿಷತ್ ಸದಸ್ಯರಿದ್ದಾರೆ ಹೀಗಾಗಿ ಮಂತ್ರಿ...

ಪಂಚಾಯತ್‌ರಾಜ್‌ನಿಂದ ದೇಶದಲ್ಲಿ ಕ್ರಾಂತಿಕಾರಕ ಬದಲಾವಣೆ

ಚಿಕ್ಕಮಗಳೂರು:  ಭಾರತ ಸ್ವಾತಂತ್ರ್ಯ ನಂತರ ಜಾರಿಗೆ ಬಂದ ಪಂಚಾಯತ್ ರಾಜ್ ವ್ಯವಸ್ಥೆಯಿಂದ ದೇಶದಲ್ಲಿ ಕ್ರಾಂತಿಕಾರಕ ಬದಲಾವಣೆ ಆಗಿದೆ. ಆದರೆ, ಇತ್ತೀಚೆಗೆ ಪಂಚಾಯತ್‌ರಾಜ್ ವ್ಯವಸ್ಥೆಯ ಅಧಿಕಾರ ಮೊಟುಕುಗೊಳಿಸುತ್ತಿರುವುದು ವಿಷಾದನೀಯ ಎಂದು ಎಂದು ಕೇಂದ್ರ...

Related Articles

ಲಕ್ಯ ಕ್ರಾಸ್ ಬಳಿ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಚಾಲಕ ಸಾವು

ಚಿಕ್ಕಮಗಳೂರು:  ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಯ ಕ್ರಾಸ್ ಬಳಿ ಸೋಮವಾರ ಸಂಭವಿಸಿದ ಭೀಕರ...

ಶಾಹುರವರು ಜಾತೀಯತೆ ತೊಲಗಿಸಲು ಶ್ರಮಿಸಿದ ಮಾನವತಾವಧಿ

ಚಿಕ್ಕಮಗಳೂರು: ವೈಚಾರಿಕತೆಯ ಭದ್ರ ಬುನಾದಿಯನ್ನು ಸಾಮಾಜಿಕ ಪರಿವರ್ತನ ಚಳ ವಳಿಯ ಸಂದರ್ಭದಲ್ಲಿ ರಾಜಪ್ರಭುತ್ವದಲ್ಲಿ ಶಾಹೂ ಮಹಾರಾಜರು...

ಮಾಜಿ ಸೈನಿಕರಿಂದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

ಚಿಕ್ಕಮಗಳೂರು: ೨೭ನೇ ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಭಾನುವಾರ ಜಿಲ್ಲಾ...

ಸಿ.ಟಿ.ರವಿ ಮನೆಗೆ ನೋಟೀಸ್ ನೀಡಲು ಹೋದ ಪೊಲೀಸರು ವಾಪಸ್

ಚಿಕ್ಕಮಗಳೂರು: ದ್ವೇಷ ಭಾಷಣ ಪ್ರಕರಣದಲ್ಲಿ ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ, ನಗರ...