Home Latest News ಎಸ್ಎಲ್ ಭೋಜೇಗೌಡರಿಂದ ನೀಚ ಕೃತ್ಯ : ದೇವೆಂದ್ರ ಗಂಭೀರ ಆರೋಪ
Latest News

ಎಸ್ಎಲ್ ಭೋಜೇಗೌಡರಿಂದ ನೀಚ ಕೃತ್ಯ : ದೇವೆಂದ್ರ ಗಂಭೀರ ಆರೋಪ

Share
Share

ಚಿಕ್ಕಮಗಳೂರು : ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದು ಮತ ಹಾಕುವ ನಿರ್ದೇಶಕರುಗಳನ್ನು ಮನೆಗೆ ಕರೆಸಿ ಆಣೆ ಪ್ರಮಾಣ ಮಾಡಿಸುತ್ತಿದ್ದಾರೆ ಎಂದು ನೌಕರರ ಸಂಘದ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ದೇವೇಂದ್ರ ಗಂಭೀರ ಆರೋಪ ಮಾಡಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ದೇವೇಂದ್ರ, ನಿರ್ದೇಶಕರುಗಳಿಗೆ ಹಣ,ಬೆಳ್ಳಿ ಬಟ್ಟಲು ಆಮಿಷ ಓಡುತ್ತಿದ್ದು, ರೆಸಾರ್ಟ್ ಗೆ ಬಂದು ವಾಸ್ತವ್ಯ ಹೂಡುವಂತೆ ಒತ್ತಡ ಏರುತ್ತಿದ್ದಾರೆ. ಇಂತಹ ನೀಚ ಕೃತ್ಯವನ್ನು ಬೋಜೇಗೌಡರು ಮಾಡಬಾರದು ಎಂದಿರುವ ದೇವೇಂದ್ರ, ನೌಕರರ ಸಂಘದ ಚುನಾವಣೆಯ ವಿಷಯವನ್ನು ಮತ್ತೋರ್ವ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಹೇಮಂತ್ ಕುಮಾರ್ ಸಾರ್ವಜನಿಕ ಗೊಳಿಸುತ್ತಿರುವುದು ದುರಂತ ಇದು ಸಂಘಕ್ಕೆ ವಿನಾಶಕಾರಿ, ಕಂದಾಯ ನೌಕರರ ಸಂಘವನ್ನು ವರ್ಷಾನುಗಟ್ಟಲೆ ಸಭೆ ನಡೆಸದೆ, ಯಾವುದೇ ಚಟುವಟಿಕೆಗಳನ್ನು ನಡೆಸದೆ ಶಾಶ್ವತವಾಗಿ ಮುಚ್ಚಿರುವ ಇವರ ಅಹಂಕಾರದಿಂದಲೇ ಮತದಾರರ ಪಟ್ಟಿಯಲ್ಲಿ ಹಲವರ ಹೆಸರು ಕೈ ಬಿಡಲಾಗಿತ್ತು.

ನೌಕರರ ಕ್ಯಾಂಟೀನ್ ನಿರ್ಮಾಣದಲ್ಲಿ 30 ಲಕ್ಷ ಭ್ರಷ್ಟಾಚಾರ ಆಗಿದೆ ಎಂದು ಆರೋಪಿಸಿರುವ ಕಿರಣ್ ಕುಮಾರ್ ಮೇಲೆ ಮಾನ ನಷ್ಟ ದಾವೆ ಹೂಡುವುದಾಗಿ ದೇವೇಂದ್ರ ಇದೆ ವೇಳೆ ಹೇಳಿದ್ದಾರೆ. ಕಿರಣ್ ಕುಮಾರ್ ಬಿಇಒ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿ ಮೂವರು ಶಿಕ್ಷಕರಿಗೆ ಮೆಡಿಕಲ್ ನಕಲಿ ಬಿಲ್ ಸೃಷ್ಟಿಸಿ 15 ಲಕ್ಷ ಭ್ರಷ್ಟಾಚಾರ ನಡೆಸಿ ಬಿ.ಇ.ಓ ತಲದಂಡ ಆಗುತ್ತದೆ ಎಂಬುದು ಗೊತ್ತಾಗಿ ಮತ್ತೆ ಸರ್ಕಾರಕ್ಕೆ 15 ಲಕ್ಷ ವಾಪಸ್ ಕಟ್ಟಿದ್ದು ಏಕೆ ಸ್ಪಷ್ಟಪಡಿಸಲಿ ಎಂದರು.

ಇದೆ ವೇಳೆ ಮಾತನಾಡಿದ ಅವರು ಬಸ್ ಮಂಜರನ್ನು ಸಂಘ ವಿರೋಧಿ ಚಟುವಟಿಕೆಯಲ್ಲಿ ಅಮಾನತ್ತುಗೊಳಿಸಿರುವುದು ನಾವಲ್ಲ ಹೊರತಾಗಿ ರಾಜ್ಯ ಸಂಘ. ಸಂಘದ ಬೈಲಾನೆ ಗೊತ್ತಿಲ್ಲದ ಮಂಜುನಾಥ್ ಈ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕೆ ಅಮಾನತ್ತುಗೊಂಡಿದ್ದರು. ನಾನು ಬೋಜೇಗೌಡರ, ಬೆದರಿಕೆಗೆ ಹೆದರುವುದಿಲ್ಲ., ನಮಗೆ ಯಾವುದೇ ಭಯವೂ ಇಲ್ಲ, ಬುಧವಾರ ನಡೆಯಲಿರುವ ಚುನಾವಣೆ ನಿಸ್ಪಕ್ಷಪಾತವಾಗಿ, ಸುಸೂತ್ರವಾಗಿ, ಪಾರದರ್ಶಕವಾಗಿ ನಡೆಯಬೇಕು ಎಂಬುದೇ ನಮ್ಮ ಆಶಯವಾಗಿದೆ ಎಂದು ದೇವೇಂದ್ರಪ್ಪ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಇದೇ ವೇಳೆ ಸರ್ಕಾರಿ ನೌಕರರ ಸಂಘದ ಪರಿಷತ್ ಸ್ಥಾನಕ್ಕೆ ಸ್ಥಾನದ ಅಭ್ಯರ್ಥಿ ಪೂರ್ಣೇಶ್ , ಖಜಾಂಚಿ ಸ್ಥಾನದ ಅಭ್ಯರ್ಥಿ ಚೇತನ್ ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...