Home Latest News ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೆಂದ್ರ ಅಮಾನತು ಆದೇಶ ರದ್ದು : ಭೋಜೇಗೌಡರ ಹಠ ಏನಾಯ್ತು
Latest News

ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೆಂದ್ರ ಅಮಾನತು ಆದೇಶ ರದ್ದು : ಭೋಜೇಗೌಡರ ಹಠ ಏನಾಯ್ತು

Share
Share

ಚಿಕ್ಕಮಗಳೂರು : ಜಿಲ್ಲಾ ನೌಕರರ ಸಂಘದ ಚುನಾವಣೆಯ ಹಣಾಹಣಿಯಲ್ಲಿ ದೇವೇಂದ್ರ ಜಿಲ್ಲಾ ಸಂಘದ ಅಧ್ಯಕ್ಷರಾಗಿ ಗೆದ್ದರೂ ಎಂಎಲ್ಸಿ ಭೋಜೇಗೌಡರ ಹಠ ಸಾಧಿಸಿ ಅಮಾನತು ಮಾಡಿಸಿ ಉಡುಪಿ ಜಿಲ್ಲೆಯ ಕುಂದಾಪುರಕ್ಕೆ ಸ್ಥಳ ನಿಯುಕ್ತಿಗೊಳಿಸಲಾಗಿತ್ತು.

ನಂತರ ಭೋಜೇಗೌಡರನ್ನು ಮನವೊಲಿಸಲು ಅಧಿವೇಶನದ ವೇಳೆ ಬೆಳಗಾವಿಗೆ ಹೋಗಿದ್ದ ದೇವೇಂದ್ರ ನಿರಾಶರಾಗಿ ಬಂದಿದ್ದರು.

ಇದೀಗ ದೇವೇಂದ್ರ ಅಮಾನತು ಆದೇಶ ರದ್ದುಪಡಿಸಿ ಅಲ್ದೂರು ಕಾಲೇಜ್ ಗೆ ಸ್ಥಳ ನಿಯುಕ್ತಿ ಗೊಳಿಸಲಾಗಿದೆ. ನಾಳೆ ರಾಜ್ಯದ ಸರ್ಕಾರಿ ನೌಕರರ ರಾಜ್ಯ ಅಧ್ಯಕ್ಷರು ಮತ್ತು ಖಜಾಂಚಿ ಸ್ಥಾನಕ್ಕೆ ಚುನಾವಾಣೆ ನಡೆಯಲಿದೆ. ಅದರಲ್ಲಿ ಯಾರಿಗೆ ದೇವೆಂದ್ರ ಟೀಂ ಮತ ಚಾಲಯಿಸುತ್ತಾರೆ ಎಂಬುದರ ದಿಕ್ಸೂಚಿಯ ಫಲವೇ ಅಮಾನತು ರದ್ದುಗೊಳಿಸಿರುವುದು ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಅಮಾನತು ರದ್ದು ಮಾಡಿಸಲು ಚಿಕ್ಕಮಗಳೂರು ಶಾಸಕ ಹೆಚ್.ಡಿ.ತಮ್ಮಯ್ಯ, ಶೃಂಗೇರಿಯ ಟಿ.ಡಿ.ರಾಜೇಗೌಡ ವಿಧಾನ ಪರಿಷತ್ ಉಪ ಸಭಾಪತಿ ಪ್ರಾಣೇಶ್. ಹಾಗೂ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿರುವ ಕೃಷ್ಣೇಗೌಡರ ಪ್ರಭಾವದಿಂದಾಗಿ ದೇವೇಂದ್ರ ರಿವೋಕ್ ಆಗಿದ್ದಾರೆ ಎನ್ನಲಾಗುತ್ತಿದೆ ಆದರೆ ಭೋಜೇಗೌಡರ ಹಠ ಏನಾಯಿತು ಎಂಬುದು ಸದ್ಯ ಎಲ್ಲರನ್ನೂ ಕಾಡುತ್ತಿರುವ ಪ್ರಶ್ನೆ ಆಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...