Home Latest News ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೆಂದ್ರ ಅಮಾನತು ಆದೇಶ ರದ್ದು : ಭೋಜೇಗೌಡರ ಹಠ ಏನಾಯ್ತು
Latest News

ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೆಂದ್ರ ಅಮಾನತು ಆದೇಶ ರದ್ದು : ಭೋಜೇಗೌಡರ ಹಠ ಏನಾಯ್ತು

Share
Share

ಚಿಕ್ಕಮಗಳೂರು : ಜಿಲ್ಲಾ ನೌಕರರ ಸಂಘದ ಚುನಾವಣೆಯ ಹಣಾಹಣಿಯಲ್ಲಿ ದೇವೇಂದ್ರ ಜಿಲ್ಲಾ ಸಂಘದ ಅಧ್ಯಕ್ಷರಾಗಿ ಗೆದ್ದರೂ ಎಂಎಲ್ಸಿ ಭೋಜೇಗೌಡರ ಹಠ ಸಾಧಿಸಿ ಅಮಾನತು ಮಾಡಿಸಿ ಉಡುಪಿ ಜಿಲ್ಲೆಯ ಕುಂದಾಪುರಕ್ಕೆ ಸ್ಥಳ ನಿಯುಕ್ತಿಗೊಳಿಸಲಾಗಿತ್ತು.

ನಂತರ ಭೋಜೇಗೌಡರನ್ನು ಮನವೊಲಿಸಲು ಅಧಿವೇಶನದ ವೇಳೆ ಬೆಳಗಾವಿಗೆ ಹೋಗಿದ್ದ ದೇವೇಂದ್ರ ನಿರಾಶರಾಗಿ ಬಂದಿದ್ದರು.

ಇದೀಗ ದೇವೇಂದ್ರ ಅಮಾನತು ಆದೇಶ ರದ್ದುಪಡಿಸಿ ಅಲ್ದೂರು ಕಾಲೇಜ್ ಗೆ ಸ್ಥಳ ನಿಯುಕ್ತಿ ಗೊಳಿಸಲಾಗಿದೆ. ನಾಳೆ ರಾಜ್ಯದ ಸರ್ಕಾರಿ ನೌಕರರ ರಾಜ್ಯ ಅಧ್ಯಕ್ಷರು ಮತ್ತು ಖಜಾಂಚಿ ಸ್ಥಾನಕ್ಕೆ ಚುನಾವಾಣೆ ನಡೆಯಲಿದೆ. ಅದರಲ್ಲಿ ಯಾರಿಗೆ ದೇವೆಂದ್ರ ಟೀಂ ಮತ ಚಾಲಯಿಸುತ್ತಾರೆ ಎಂಬುದರ ದಿಕ್ಸೂಚಿಯ ಫಲವೇ ಅಮಾನತು ರದ್ದುಗೊಳಿಸಿರುವುದು ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಅಮಾನತು ರದ್ದು ಮಾಡಿಸಲು ಚಿಕ್ಕಮಗಳೂರು ಶಾಸಕ ಹೆಚ್.ಡಿ.ತಮ್ಮಯ್ಯ, ಶೃಂಗೇರಿಯ ಟಿ.ಡಿ.ರಾಜೇಗೌಡ ವಿಧಾನ ಪರಿಷತ್ ಉಪ ಸಭಾಪತಿ ಪ್ರಾಣೇಶ್. ಹಾಗೂ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿರುವ ಕೃಷ್ಣೇಗೌಡರ ಪ್ರಭಾವದಿಂದಾಗಿ ದೇವೇಂದ್ರ ರಿವೋಕ್ ಆಗಿದ್ದಾರೆ ಎನ್ನಲಾಗುತ್ತಿದೆ ಆದರೆ ಭೋಜೇಗೌಡರ ಹಠ ಏನಾಯಿತು ಎಂಬುದು ಸದ್ಯ ಎಲ್ಲರನ್ನೂ ಕಾಡುತ್ತಿರುವ ಪ್ರಶ್ನೆ ಆಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ

ಚಿಕ್ಕಮಗಳೂರು:  ಬಾಲ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪ ರಾಧವಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರಿಗೆ ೬ ತಿಂಗಳಿಗಿಂತ ಕಡಿಮೆಯಿಲ್ಲದಂತೆ ೨ ವರ್ಷ ಜೈಲು ಶಿಕ್ಷೆ ಹಾ ಗೂ...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

Related Articles

ಜು.5ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಿಕ್ಕಮಗಳೂರು: ಮಲೆನಾಡಿನ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ತಲುಪಿಸುವ ಉದ್ದೇಶದಿಂದ ಆರ್‌ವಿಆರ್ ಹೆಲ್ತ್‌ಕೇರ್ ವತಿಯಿಂದ ಉಚಿತ...

ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ವಿರುದ್ಧ ಆಯೋಗದ ತೀರ್ಪು

ಚಿಕ್ಕಮಗಳೂರು: ಸಕಾಲದಲ್ಲಿ ಆಹಾರ ಪದಾರ್ಥವನ್ನು ತಲುಪಿಸದೆ ಆಹಾರ ಸಾಮಗ್ರಿಗಳು ಹಾಳಾಗಲು ಕಾರಣವಾದ ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್...

ಮುತ್ತೋಡಿ ಅರಣ್ಯದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಚಿರತೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ದ ಮುತ್ತೋಡಿ ಅರಣ್ಯ ವಲಯದಲ್ಲಿ ಪ್ರವಾಸಿಗರಿಗೆ ಅತ್ಯಂತ ಅಪರೂಪದ ಹಾಗೂ ರೋಮಾಂಚನಕಾರಿ ದೃಶ್ಯವೊಂದು...

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ...