Home namma chikmagalur ನಿಡುವಾಳೆಗೆ ಬಂದ ಯಮ ಧರ್ಮರಾಯ-ಚಿತ್ರಗುಪ್ತ
namma chikmagalurchikamagalurHomeLatest News

ನಿಡುವಾಳೆಗೆ ಬಂದ ಯಮ ಧರ್ಮರಾಯ-ಚಿತ್ರಗುಪ್ತ

Share
Share

ಕೊಟ್ಟಿಗೆಹಾರ:ಹೊಂಡ ಗುಂಡಿಗಳಿಂದ ಕೂಡಿದ ರಸ್ತೆ ದುಸ್ಥಿತಿಯ ಬಗ್ಗೆ ಗಮನ ಸೆಳೆಯಲು ಮತ್ತು ದ್ವಿಚಕ್ರವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಯಮ ಹಾಗೂ ಚಿತ್ರಗುಪ್ತರ ವೇಷ ತೊಟ್ಟು ನಿಡುವಾಳೆಯಲ್ಲಿ ಜನಜಾಗೃತಿ ಮೂಡಿಸಲಾಯಿತು.

ನಿಡುವಾಳೆ ಗ್ರಾ.ಪಂ ಉಪಾಧ್ಯಕ್ಷ ನವೀನ್ ಹಾವಳಿ ಮತ್ತು ಹಾಸ್ಯ ಕಲಾವಿದ ರಮೇಶ್ ಯಾದವ್ ಯಮ ಚಿತ್ರ ಗುಪ್ತರ ವೇಷ ತೊಟ್ಟು ಗಮನ ಸೆಳೆದರು. ರಸ್ತೆಯ ಗುಂಡಿಗಳನ್ನು ಚಿತ್ರಗುಪ್ತ ಅಳತೆ ಮಾಡಿದರೇ ಯಮ ಧರ್ಮರಾಯ ಅಳತೆಯ ಲೆಕ್ಕ ಬರೆದುಕೊಂಡರು.

ದ್ವಿಚಕ್ರವಾಹನದಲ್ಲಿ ಹೆಲ್ಮೆಟ್ ಇಲ್ಲದೇ ಸಂಚರಿಸುತ್ತಿರುವವರನ್ನು ನಿಲ್ಲಿಸಿ ಹೆಲ್ಮೆಟ್ ಧರಿಸುವಂತೇ ಯಮಧರ್ಮರಾಯನ ವೇಷಧಾರಿ ಅರಿವು ಮೂಡಿಸಿದರು. ಸಮೀಪದ ನ್ಯಾಯಬೆಲೆ ಅಂಗಡಿಗೆ ತೆರಳಿ ಅಕ್ಕಿ ಚೀಲಕ್ಕೆ ಕೈ ಹಾಕಿ ಅಕ್ಕಿಯ ಕ್ವಾಲಿಟಿಯನ್ನು ಪರಿಶೀಲಿಸಿದರು.

ರಸ್ತೆಯಲ್ಲಿ ಪ್ರಯಾಣಿಸುವವರಿಗೆ ಮದ್ಯ ಸೇವಿಸಿ ವಾಹನ ಚಲಾಯಿಸಬೇಡಿ. ಹಾಗೇ ಮಾಡಿದರೇ ಯಮ ಮತ್ತು ಚಿತ್ರಗುಪ್ತರಿಗೆ ಕೆಲಸ ಹೆಚ್ಚಾಗುತ್ತದೆ ಎಂದು ನಗೆ ಚಟಾಕಿ ಹಾರಿಸಿದರು. ಗದೆ ಹಿಡಿದು ವೇಷ ಧರಿಸಿ ರಸ್ತೆಗೆ ಬಂದ ವೇಷಧಾರಿಗಳ ಪ್ರಯತ್ನಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮತ್ತು ಹದಗೆಟ್ಟ ರಸ್ತೆಗಳನ್ನು ದುರಸ್ಥಿ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Yama Dharmaraya-Chitragupta who came to Niduvale

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಸ್ಥಾಪನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಶನ್ ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ...

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...