Home namma chikmagalur chikamagalur ಗೋಲಿ ಆಟವಾಡಲು ಅವಕಾಶ ನೀಡದಕ್ಕೆ ಯುವಕ ಮೇಲೆ ಹಲ್ಲೆ
chikamagalurHomeLatest Newsnamma chikmagalur

ಗೋಲಿ ಆಟವಾಡಲು ಅವಕಾಶ ನೀಡದಕ್ಕೆ ಯುವಕ ಮೇಲೆ ಹಲ್ಲೆ

Share
Share

ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ನಗರದ ಆಶ್ರಯ ಬಡಾವಣೆಯ ಸಮುದಾಯ ಭವನದ ಮೈದಾನದಲ್ಲಿ ನಡೆದಿದೆ.

ಮೈದಾನದಲ್ಲಿ ಅರುಣ, ಮಣಿಕಂಠ ಹಾಗೂ ಯತೀಶ್ ಎಂಬುವವರು ಗೋಲಿ ಆಟವಾಡುತ್ತಿದ್ದು, ಅದನ್ನು ನೋಡಿದ ಸೋಮಶೇಖರ್ ಎಂಬ ಯುವಕ ತನಗೂ ಒಂದು ಆಟ ಆಡಲು ಅವಕಾಶ ನೀಡುವಂತೆ ಕೇಳಿದ್ದಾನೆ.

ಈ ಮಾತಿಗೆ ತೀವ್ರವಾಗಿ ಕೆರಳಿದ ಅರುಣ ಹಾಗೂ ಆತನ ಸ್ನೇಹಿತರು ಸೋಮಶೇಖರ್‌ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಏಕಾಏಕಿ ಕುತ್ತಿಗೆ ಪಟ್ಟಿ ಹಿಡಿದು ಅಲ್ಲೇ ಇದ್ದ ಜಲ್ಲಿಕಲ್ಲಿನ ಮೇಲೆ ತಳ್ಳಿ ಹಾಕಿದ್ದಾರೆ.

ಅಷ್ಟಕ್ಕೇ ನಿಲ್ಲಿಸದೆ ಕೆಳಗೆ ಬಿದ್ದಿದ್ದ ಯುವಕನನ್ನು ಕಾಲಿನಿಂದ ಮನಬಂದಂತೆ ಒದ್ದು ತೀವ್ರವಾಗಿ ಗಾಯಗೊಳಿಸಿದ್ದಾರೆ.

ಗಲಾಟೆಯ ಸದ್ದು ಕೇಳಿ ಓಡಿಬಂದ ಸ್ಥಳೀಯರು ತಕ್ಷಣವೇ ಜಗಳವನ್ನು ಬಿಡಿಸಿದ್ದು, ಸದ್ಯ ಗಾಯಾಳು ಸೋಮಶೇಖ‌ರ್ ಸರ್ಕಾರಿ ಮಲ್ಲೇಗೌಡ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಲ್ಲೆ ನಡೆಸಿದ ಮೂವರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Young man attacked for not allowing him to play goalie

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯಕೀಯ ಕಾಲೇಜ್ ನಲ್ಲಿ ಲೂಟಿ ! ಲೂಟಿ !-ನೂರಾರು ಕೋಟಿ ನುಂಗಿರುವ ಖದೀಮರು?

ಚಿಕ್ಕಮಗಳೂರು: ನೂತನವಾಗಿ ನಿರ್ಮಾಣ ವಾಗಿರುವ ವೈದ್ಯಕೀಯ ಕಾಲೇಜ್ ಕಟ್ಟಡದಲ್ಲಿ ಕೋಟಿ, ಕೋಟಿರೂ ನುಂಗಿರುವ ಖದೀಮರು. ಟೆಂಡರ್ ಲೋಪ ದೋಷಗಳ ಪ್ರಕಾರ ನೂರಾರು ಕೋಟಿ ಅಕ್ರಮ ನಡೆದಿದೆ ಎನ್ನಲಾಗುತ್ತಿದೆ. ಟೆಂಡರ್ ಅವಧಿ 30...

ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಿ ಸಮಾನ ಮನಸ್ಕರ ಪ್ರತಿಭಟನೆ

ಚಿಕ್ಕಮಗಳೂರು : ನೀಟ್ ಪದೆಶ್ನೆ ಪತ್ರಿಕೆ ಸೋರಿಕೆ ತಡೆಯುವಲ್ಲಿ ವಿಫಲವಾಗಿರುವ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯಿಸಿ ವಿಧ್ಯಾರ್ಥಿ ಹೋರಾಟವನ್ನು ಬೆಂಬಲಿಸಿ ನಗರದ ಆಜಾದ್ ವೃತ್ತದಲ್ಲಿಂದು ಸಮಾನ ಮನಸ್ಕರು ಹಾಗೂ ಪ್ರಗತಿಪರ...

Related Articles

ಕಡೂರು ತಾಲ್ಲೂಕು ಬರಪೀಡಿತ ತಾಲ್ಲೂಕು ಘೋಷಣೆಗೆ ವೈ.ಎಸ್.ವಿ.ದತ್ತ ಒತ್ತಾಯ

ಚಿಕ್ಕಮಗಳೂರು: ತೀವ್ರ ಬರಗಾಲಕ್ಕೆ ತುತ್ತಾಗಿರುವ ಕಡೂರು ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಸರ್ಕಾರ ಘೋಷಿಸಬೇಕು. ತುರ್ತು...

ಸೊಪ್ಪು ಕಡಿಯಲು ಮರ ಹತ್ತಿದ್ದ ವ್ಯಕ್ತಿ ಕೆಳಗೆ ಬಿದ್ದು ಸಾವು

ಎನ್.ಆ‌ರ್. ಪುರ: ಸೊಪ್ಪು ಕಡಿಯಲು ಮರ ಹತ್ತಿದ್ದ ವೇಳೆ ಒಣಗಿದ ಕೊಂಬೆ ಮುರಿದು ಕೆಳಗೆ ಬಿದ್ದು...

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ರೂಬೆನ್ ಮೊಸಸ್ ಗೆ ನ್ಯಾಷನಲ್ ಬೆಸ್ಟ್ ಸೋಷಿಯಲ್ ವರ್ಕರ್ ಅವಾರ್ಡ್ 

ಚಿಕ್ಕಮಗಳೂರು: ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ರೂಬೆನ್ ಮೊಸಸ್ ರವರಿಗೆ ನ್ಯಾಷನಲ್ ಬೆಸ್ಟ್ ಸೋಷಿಯಲ್ ವರ್ಕರ್ ಅವಾರ್ಡ್ ದೊರೆತಿದೆ....