ಚಿಕ್ಕಮಗಳೂರು: ಕಳಸ ತಾಲೂಕಿನ ಮೈದಾಡಿ ಯಮಗೊಂಡ ಎಸ್ಟೇಟ್ನಲ್ಲಿ ಕಾಡುಕೋಣದ ದಾಳಿಗೆ ಯುವಕನೊಬ್ಬ ಬಲಿಯಾದ ಘಟನೆ ನಡೆದಿದೆ.
ಮೃತರನ್ನು 30 ವರ್ಷದ ಚೇತನ್ ಎಂದು ಗುರುತಿಸಲಾಗಿದೆ. ಕೆಲಸದ ವೇಳೆ ಏಕಾಏಕಿ ಕಾಡುಕೋಣ ದಾಳಿ ನಡೆಸಿದ್ದು, ಅದರ ಕೊಂಬು ಚೇತನ್ ಅವರ ಎದೆಗೆ ತೀವ್ರವಾಗಿ ಚುಚ್ಚಿದ ಪರಿಣಾಮ ಗಂಭೀರ ಗಾಯಗಳಾಗಿತ್ತು.
ತಕ್ಷಣ ಅವರನ್ನು ಕಳಸ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆ ಕಳಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Young man killed in wild buffalo attack
Leave a comment