Home namma chikmagalur chikamagalur ಲಾಭಾಂಶ ಆಮಿಷ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚನೆ
chikamagalurHomeLatest Newsnamma chikmagalur

ಲಾಭಾಂಶ ಆಮಿಷ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚನೆ

Share
Share

ಚಿಕ್ಕಮಗಳೂರು: ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚಿನ ಲಾಭಾಂಶ ನೀಡುವ ಆಮಿಷವೊಡ್ಡಿ ಯುವಕನೊಬ್ಬನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿನಯ್ ಬಿ.ಕೆ. ಎಂಬವರು ಈ ವಂಚನೆಗೆ ಒಳಗಾದ ದುರ್ದೈವಿ. ಇವರಿಗೆ ಶೇರು ಮಾರುಕಟ್ಟೆ ಮತ್ತು ಟ್ರೇಡಿಂಗ್‌ನಲ್ಲಿ ಇದ್ದ ಆಸಕ್ತಿಯನ್ನೇ ಬಂಡವಾಳವಾಗಿಸಿಕೊಂಡ ಸೈಬರ್ ವಂಚಕರು, ಗೂಗಲ್ ಹಾಗೂ ಇನ್‌ಸ್ಟಾಗ್ರಾಂ ಸರ್ಚ್ ಹಿಸ್ಟರಿ ಆಧಾರದ ಮೇಲೆ ಇವರನ್ನು ಸಂಪರ್ಕಿಸಿದ್ದಾರೆ.

ಕಳೆದ ನವೆಂಬರ್ ತಿಂಗಳಲ್ಲಿ 56 Financial Home’ ಎಂಬ ವಾಟ್ಸಾಪ್ ಗ್ರೂಪ್‌ಗೆ ವಿನಯ್ ಅವರನ್ನು ಸೇರಿಸಿಕೊಂಡಿದ್ದ ನಿತಿನ್ ಜೋಶಿ ಎಂಬ ವ್ಯಕ್ತಿ, ಪ್ರತಿದಿನ ಟ್ರೇಡಿಂಗ್ ಲಾಭದ ಬಗ್ಗೆ ಸುಳ್ಳು ಅಪ್‌ಡೇಟ್‌ಗಳನ್ನು ನೀಡುವ ಮೂಲಕ ನಂಬಿಕೆ ಹುಟ್ಟಿಸಿದ್ದಾನೆ.

ಆರೋಪಿಯ ಮಾತನ್ನು ನಂಬಿದ ವಿನಯ್, ಹೆಚ್ಚಿನ ಲಾಭದ ಆಸೆಯಿಂದ ಹಂತ ಹಂತವಾಗಿ ‘AVENIR LLC’ ಹಾಗೂ ‘Bharath own payments app ಗಳ ಮೂಲಕ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 2,92,000/- ರೂಪಾಯಿಗಳನ್ನು ವರ್ಗಾವಣೆ ಮಾಡಿದ್ದಾರೆ.

ಲಾಭಾಂಶದ ಹಣವನ್ನು ವಿತ್‌ಡ್ರಾ ಮಾಡಲು ಪ್ರಯತ್ನಿಸಿದಾಗ ಅದು ಸಾಧ್ಯವಾಗದಿದ್ದಾಗ ತಾನು ವಂಚನೆಗೆ ಒಳಗಾಗಿರುವುದು ಅವರಿಗೆ ಅರಿವಾಗಿದೆ. ಈ ಬಗ್ಗೆ ವಿನಯ್ ನೀಡಿದ ದೂರಿನ ಮೇರೆಗೆ ಸೆನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ವಂಚಕರ ಪತ್ತೆಗಾಗಿ ತನಿಖೆ ಆರಂಭಿಸಿದ್ದಾರೆ.

Youth cheated of lakhs of rupees under the lure of dividends

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಸ್ಥಾಪನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಶನ್ ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ...

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...