Home namma chikmagalur chikamagalur ಮನೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
chikamagalurCrime NewsHomeLatest Newsnamma chikmagalur

ಮನೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Share
Share

ಚಿಕ್ಕಮಗಳೂರು: ನಗರದ ಶಂಕರಪುರ ಬಡಾವಣೆಯಲ್ಲಿ 25 ವರ್ಷದ ಅವಿವಾಹಿತ ಯುವಕನೊಬ್ಬ ತನ್ನ ಮನೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಸಾವಿನ ಹಿಂದೆ ತೀವ್ರ ಅನುಮಾನವಿದೆ ಎಂದು ಯುವಕನ ತಾಯಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮೃತ ಯುವಕನನ್ನು ಮೂರ್ತಿ ಎಲ್. (25) ಎಂದು ಗುರುತಿಸಲಾಗಿದೆ. ಈತ ಬಾರ್ ಬೆಂಡಿಂಗ್ ಕೆಲಸ ಮಾಡಿಕೊಂಡಿದ್ದನು. ಆತನ ಮನೆಯ ಸಮೀಪದ ವಿವಾಹಿತ ಮಹಿಳೆಯೊಂದಿಗೆ ಕಳೆದ ಒಂದು ವರ್ಷದಿಂದ ಕಳ್ಳಸಂಬಂಧವಿತ್ತು ಎನ್ನಲಾಗಿದೆ.

ಈ ಸಂಬಂಧದ ಬಗ್ಗೆ ತಾಯಿ ಹಾಗೂ ಸಂಬಂಧಿಕರು ಇಬ್ಬರಿಗೂ ಬುದ್ಧಿವಾದ ಹೇಳಿದ್ದರು. ಅಲ್ಲದೆ ಈ ಹಿಂದೆ ಮಹಿಳಾ ಪೊಲೀಸ್ ಠಾಣೆಗೂ ದೂರು ನೀಡಿ ಪೊಲೀಸರಿಂದಲೂ ಎಚ್ಚರಿಕೆ ಕೊಡಿಸಲಾಗಿತ್ತು. ಆದರೂ ಸಹಾ ಆಕೆ ಬೇರೆ ಬೇರೆ ಮೊಬೈಲ್ ನಂಬಗರ್‌ಳಿಂದ ಕರೆ ಮಾಡಿ ತನ್ನ ಮನೆಗೆ ಕರೆಸಿಕೊಳ್ಳುತ್ತಿದ್ದಳು. ಇದರಿಂದಾಗಿ ಮೂರ್ತಿ ಆಕೆಯ ವ್ಯಾಮೋಹಕ್ಕೆ ಬಿದ್ದಿದ್ದನು.

ಏಕಾಏಕಿ ಬೇಸರಗೊಂಡು ಬುಧವಾರ ರಾತ್ರಿ ಮನೆಯ ಚಿಲಕ ಹಾಕಿಕೊಂಡು ಮೂರ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು. ತಾಯಿ ಮನೆಗೆ ಬಂದು ಬಾಗಿಲಿನ ಸಂದಿನಿಂದ ಇಣುಕಿ ನೋಡಿದಾಗ ಮೂರ್ತಿಯ ಕಾಲುಗಳು ನೇತಾಡುತ್ತಿರುವುದು ಕಂಡಿದೆ.

ತಕ್ಷಣವೇ ಅಕ್ಕನ ಮಕ್ಕಳ ಸಹಾಯದಿಂದ ಬಾಗಿಲು ಒಡೆದು ಸೀರೆಯನ್ನು ಕೊಯ್ದು ಆಸ್ಪತ್ರೆಗೆ ಕರೆದೊಯ್ದರೂ, ವೈದ್ಯರು ಆತ ಈಗಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಮಗನ ಆತ್ಮಹತ್ಯೆಯ ನಿಖರ ಕಾರಣ ತಿಳಿಯದ ಹಿನ್ನೆಲೆಯಲ್ಲಿ ತಾಯಿ ಗುರಮ್ಮ ನೀಡಿದ ದೂರಿನ ಮೇರೆಗೆ ನಗರ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Youth commits suicide by hanging himself with saree at home

Share

Leave a comment

Leave a Reply

Your email address will not be published. Required fields are marked *

Don't Miss

ಬಿಡದಿ ರೈತರ ಹೋರಾಟ ಬೆಂಬಲಿಸಿ ಆ.25ರಂದು ವಿಧಾನಸೌಧ ಚಲೋ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹಾಗೂ ರೈತರ ಭೂಮಿ ರಕ್ಷಣೆಗೆ ಆಗ್ರಹಿಸಿ ಆ.25ರಂದು ಬೆಂಗಳೂರಿನಲ್ಲಿ ಬೃಹತ್ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು...

ಮುಂಗಾರು ಋತುವಿನಲ್ಲಿ ಜಿಲ್ಲೆಯಲ್ಲಿ ಶೇ.35 ಮಳೆ ಕೊರತೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಋತುವಿನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದೆ ಶೇ.೩೫ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...

Related Articles

ಕುದುರೆಮುಖ ಭಾಗದಲ್ಲಿ ವಾಸಿಗರ ವಿಶೇಷ ಗಮನ ಸೆಳೆದ ನೀಲಕುರಿಂಜಿ

ಚಿಕ್ಕಮಗಳೂರು:  ಪಶ್ಚಿಮ ಘಟ್ಟಗಳ ನೈಸರ್ಗಿಕ ಸೌಂದರ್ಯಕ್ಕೆ ಮತ್ತೊಂದು ವಿಶೇಷ ಮೆರುಗು ನೀಡುವಂತೆ ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ...

‘ರಾಷ್ಟ್ರದ ಸುರಕ್ಷತೆಗಾಗಿ ಎಲ್ಲರೂ ಒಂದಾಗಬೇಕು’

ಚಿಕ್ಕಮಗಳೂರು: ರಾಷ್ಟ್ರದ ಸುರಕ್ಷತೆ ಹಾಗೂ ದೇಶದ ಹಿತಾಸಕ್ತಿಗಾಗಿ ವೈಯಕ್ತಿಕ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲರೂ...

ಆರೋಪಿಯಿಂದ ₹11.30 ಲಕ್ಷ ಮೌಲ್ಯದ 71 ಗ್ರಾಂ ಚಿನ್ನಾಭರಣ ವಶ

ಎನ್.ಆ‌ರ್. ಪುರ: ಮನೆಯ ಹಂಚು ತೆಗೆದು ಒಳನುಗ್ಗಿ, ಮಲಗಿದ್ದ ಮಹಿಳೆಯ ಕೊರಳಿನಿಂದ ಮಾಂಗಲ್ಯ ಸರ ಎಗರಿಸಿದ್ದ...

ಅಜ್ಜಂಪುರ ಸುತ್ತಮುತ್ತ ಕರಡಿ ಹಾವಳಿ

ಅಜ್ಜಂಪುರ: ಅಜ್ಜಂಪುರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕರಡಿ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಗಲು-ರಾತ್ರಿ...