Home namma chikmagalur chikamagalur ಶೃಂಗೇರಿ ತುಂಗಾ ನದಿಯಲ್ಲಿ ಯುವಕ ನೀರುಪಾಲು
chikamagalurCrime NewsHomeLatest Newsnamma chikmagalur

ಶೃಂಗೇರಿ ತುಂಗಾ ನದಿಯಲ್ಲಿ ಯುವಕ ನೀರುಪಾಲು

Share
Share

ಶೃಂಗೇರಿ: ಪ್ರವಾಸಕ್ಕೆಂದು ಶೃಂಗೇರಿಗೆ ಬಂದಿದ್ದ ಯುವಕರ ತಂಡವೊಂದು ತುಂಗಾ ನದಿಯಲ್ಲಿ ಸ್ನಾನಕ್ಕೆ ಇಳಿದ ವೇಳೆ ಯುವಕನೊಬ್ಬ ನೀರುಪಾಲಾಗಿ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.

ಮೃತ ಯುವಕನನ್ನು ಬೆಂಗಳೂರು ಹೆಬ್ಬಾಳ ಮೂಲದ ದರ್ಶನ್ (22) ಎಂದು ಗುರುತಿಸಲಾಗಿದೆ. ದರ್ಶನ್ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಎಂದು ತಿಳಿದುಬಂದಿದೆ.

ಒಬ್ಬ ಮಹಿಳೆ ಸೇರಿದಂತೆ ಮೂವರು ಪ್ರವಾಸಿಗರು ತುಂಗಾ ನದಿಯಲ್ಲಿ ಸ್ನಾನಕ್ಕಾಗಿ ನೀರಿಗಿಳಿದಿದ್ದರು. ಈ ವೇಳೆ ದರ್ಶನ್ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದಾರೆ ಎನ್ನಲಾಗಿದೆ. ತಕ್ಷಣ ಅವರನ್ನು ರಕ್ಷಿಸಲು ಪ್ರಯತ್ನಿಸಲಾಯಿತಾದರೂ, ನೀರುಪಾಲಾಗಿದ್ದ ದರ್ಶನ್ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿದು ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆ ಕುರಿತು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Youth drowns in Tunga River at Sringeri

Share

Leave a comment

Leave a Reply

Your email address will not be published. Required fields are marked *

Don't Miss

ಸೆ.14ರಂದು ಮುಳ್ಳಯ್ಯನಗಿರಿ ಸೇರಿದಂತೆ ಗಿರಿಧಾಮಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚಂದ್ರದ್ರೋಣ ಪರ್ವತ ಸಾಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಸೆಪ್ಟೆಂಬರ್ 14ರಂದು ಒಂದು ದಿನದ ಮಟ್ಟಿಗೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶಿಸಿದೆ. ಮುಳ್ಳಯ್ಯನಗಿರಿ,...

ಸುಳ್ಳು ವಂಶವೃಕ್ಷ ಸೃಷ್ಟಿಸಿ ಆಸ್ತಿ ಲಪಟಾಯಿಸಲು ಯತ್ನ: ಐವರ ವಿರುದ್ಧ ಪ್ರಕರಣ

ಕಡೂರು: ಸುಳ್ಳು ವಂಶವೃಕ್ಷ ಸೃಷ್ಟಿಸಿ, ಅದರ ಆಧಾರದ ಮೇಲೆ ಪಿತ್ರಾರ್ಜಿತ ಆಸ್ತಿಯ ಖಾತೆ ಬದಲಾವಣೆ ಮಾಡಿಕೊಂಡು ಆಸ್ತಿಯನ್ನು ಲಪಟಾಯಿಸಲು ಒಳಸಂಚು ರೂಪಿಸಿ ವಂಚನೆ ನಡೆಸಿರುವ ಆರೋಪದಡಿ ಸಕ್ಕರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಐವರ...

Related Articles

ಸೋಮಯ್ಯಾ ಗಣಾಚಾರಿಗೆ ಎಂಎಲ್‌ಸಿ ಸ್ಥಾನ ನೀಡುವಂತೆ ಒತ್ತಾಯ

ಚಿಕ್ಕಮಗಳೂರು: ವಿಜಯಪುರ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ವೀರಶೈವ-ಲಿಂಗಾಯತ ಸಮುದಾಯದ ಪ್ರಮುಖ ನಾಯಕ ಸೋಮಯ್ಯಾ...

ಹಾಲಿನ ಖರೀದಿ ದರ ಹೆಚ್ಚಳ – ಶೀಘ್ರವೇ ಸಭೆ ನಡೆಸಿ ತೀರ್ಮಾನ

ಚಿಕ್ಕಮಗಳೂರು: ಹಾಲಿನ ಖರೀದಿ ದರ ಹೆಚ್ಚಳ ಮಾಡಬೇಕು ಎಂದು ರೈತರಿಂದ ಬೇಡಿಕೆ ಹೆಚ್ಚಾಗಿದ್ದು, ಈ ಸಂಬಂಧ...

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ವಾರ್ಷಿಕ ವಹಿವಾಟು ಮೂರು ಸಾವಿರ ಕೋಟಿ

ಚಿಕ್ಕಮಗಳೂರು: ೧೯೫೫ರಲ್ಲಿ ೧,೪೦೦ ರೂ. ಬಂಡವಾಳದೊಂದಿಗೆ ಆರಂಭಗೊಂಡ ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಇಂದು...

ಮಲೆನಾಡು-ಕರಾವಳಿಗೆ ವಿಶೇಷ ಪ್ಯಾಕೇಜ್

ಬಾಳೆಹೊನ್ನೂರು: ಮಲೆನಾಡು ಮತ್ತು ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ರೂಪಿಸಲಾಗಿದ್ದು, ಈ ಭಾಗದಿಂದ...