Home namma chikmagalur chikamagalur ಭದ್ರಾ ನದಿಯ ಹಿನ್ನೀರಿನಲ್ಲಿ ಯುವಕ ನಾಪತ್ತೆ
chikamagalurHomeLatest Newsnamma chikmagalur

ಭದ್ರಾ ನದಿಯ ಹಿನ್ನೀರಿನಲ್ಲಿ ಯುವಕ ನಾಪತ್ತೆ

Share
Share

ಎನ್. ಆರ್.ಪುರ ಭದ್ರಾ ನದಿಯ ಹಿನ್ನೀರಿನಲ್ಲಿ ಈಜಲು ತೆರಳಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ನಾಪತ್ತೆಯಾಗಿದ್ದಾರೆ.

ನರಸಿಂಹರಾಜಪುರ ತಾಲೂಕಿನ ಸಿಗುವಾನಿ ಗ್ರಾಮದ ನಿವಾಸಿ 36 ವರ್ಷದ ನಿತಿನ್ ಎಂಬುವವರೇ ನೀರಿನಲ್ಲಿ ಮುಳುಗಿ ನಾಪತ್ತೆಯಾದ ದುರ್ದೈವಿ ಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಈ ಸೇತುವೆಯ ಕೆಳಭಾಗಕ್ಕೆ ಮೂವರು ಗೆಳೆಯರು ಸ್ನಾನಕ್ಕಾಗಿ ಹಾಗೂ ಈಜಲು ತೆರಳಿದ್ದರು.

ಈ ಪೈಕಿ ಇಬ್ಬರು ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದು, ನಿತಿನ್ ಅವರು ಮಾತ್ರ ಹೊರಬರಲಾರದೆ ನೀರಿನಲ್ಲಿ ಮುಳುಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ನೂತನವಾಗಿ ನಿರ್ಮಿಸಿರುವ ಸಿದ್ದರಾಮಯ್ಯ ಸೇತುವೆಯನ್ನು ಕಳೆದ ಸೋಮವಾರವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದರು.

ನಾಪತ್ತೆಯಾಗಿರುವ ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯ ಪೊಲೀಸರು ಹಾಗೂ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದ್ದು, ನಾಪತ್ತೆಯಾದ ವ್ಯಕ್ತಿಗಾಗಿ ತೀವ್ರ ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ. ಎನ್.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Youth goes missing in Bhadra river backwaters

Share

Leave a comment

Leave a Reply

Your email address will not be published. Required fields are marked *

Don't Miss

ಶ್ರೀನಂದಾ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ..?

ಚಿಕ್ಕಮಗಳೂರು:  ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ ಬಂದಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ (14) ಪ್ರಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಏಪ್ರಿಲ್ 7ರಂದು ಕುಟುಂಬದವರೊಂದಿಗೆ ಚಿಕ್ಕಮಗಳೂರಿನ ಮಾಣಿಕ್ಯಧಾರಕ್ಕೆ ಪ್ರವಾಸಕ್ಕೆ ಬಂದಿದ್ದು, ಮಂಗಳವಾರ ಸಂಜೆ ಸುಮಾರು 5.30ರ...

ಹಿರೇಮಗಳೂರಿನಲ್ಲಿ ಗ್ರಾಮ ದೇವತೆಗಳ ವಾರ್ಷಿಕ ಸಿಡಿ ಉತ್ಸವ

ಚಿಕ್ಕಮಗಳೂರು: ನಗರ ಹೊರವಲಯದ ಹಿರೇಮಗಳೂರಿನಲ್ಲಿ ಗ್ರಾಮ ದೇವತೆಗಳಾದ ಶ್ರೀ ಕರಾಳಮ್ಮ, ಅಂತರಘಟ್ಟಮ್ಮ ಮತ್ತು ಪ್ಲೇಗಿನಮ್ಮ ನವರ ವಾರ್ಷಿಕ ಸಿಡಿ ಉತ್ಸವ ಸಹಸ್ರಾರು ಭಕ್ತರ ನಡುವೆ ಶುಕ್ರವಾರ ವೈಭವದಿಂದ ನಡೆಯಿತು. ಉತ್ಸವದ ಅಂಗವಾಗಿ...

Related Articles

ಡಾ.ಚಂದ್ರಶೇಖರ್‌ಸಾಲಿಮಠ್ ಪ್ರಭಾರ ಜಿಲ್ಲಾಸರ್ಜನ್

ಚಿಕ್ಕಮಗಳೂ: ಅರವಳಿಕೆ ವಿಭಾಗ ಮತ್ತು ಮಲ್ಲೇಗೌಡ ಜಿಲ್ಲಾಸ್ಪತ್ರೆಯ ರುಕ್ಷ್ಮಿಣಿಯಮ್ಮ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕರಾಗಿ...

ರಾಜ್ಯದಲ್ಲಿ ವಿದ್ಯುತ್ ದರ ಹುಚ್ಚಂಬಟ್ಟೆ ಏರಿಕೆ

ಚಿಕ್ಕಮಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ‌್.ಯಡಿಯೂರಪ್ಪ ತಿಳಿಸಿದರು....

ವಿದ್ಯುತ್ ದರ ಏರಿಕೆಗೆ ಸಿ.ಟಿ. ರವಿ ತೀವ್ರ ವಾಗ್ದಾಳಿ

ಚಿಕ್ಕಮಗಳೂರು : ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ವಿಧಾನಪರಿಷತ್ ಸದಸ್ಯ...

ಕಾಡುಕೋಣದ ದಾಳಿಗೆ ಯುವಕ ಬಲಿ

ಚಿಕ್ಕಮಗಳೂರು: ಕಳಸ ತಾಲೂಕಿನ ಮೈದಾಡಿ ಯಮಗೊಂಡ ಎಸ್ಟೇಟ್‌ನಲ್ಲಿ ಕಾಡುಕೋಣದ ದಾಳಿಗೆ ಯುವಕನೊಬ್ಬ ಬಲಿಯಾದ ಘಟನೆ ನಡೆದಿದೆ....