ಎನ್. ಆರ್.ಪುರ ಭದ್ರಾ ನದಿಯ ಹಿನ್ನೀರಿನಲ್ಲಿ ಈಜಲು ತೆರಳಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ನಾಪತ್ತೆಯಾಗಿದ್ದಾರೆ.
ನರಸಿಂಹರಾಜಪುರ ತಾಲೂಕಿನ ಸಿಗುವಾನಿ ಗ್ರಾಮದ ನಿವಾಸಿ 36 ವರ್ಷದ ನಿತಿನ್ ಎಂಬುವವರೇ ನೀರಿನಲ್ಲಿ ಮುಳುಗಿ ನಾಪತ್ತೆಯಾದ ದುರ್ದೈವಿ ಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಈ ಸೇತುವೆಯ ಕೆಳಭಾಗಕ್ಕೆ ಮೂವರು ಗೆಳೆಯರು ಸ್ನಾನಕ್ಕಾಗಿ ಹಾಗೂ ಈಜಲು ತೆರಳಿದ್ದರು.
ಈ ಪೈಕಿ ಇಬ್ಬರು ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದು, ನಿತಿನ್ ಅವರು ಮಾತ್ರ ಹೊರಬರಲಾರದೆ ನೀರಿನಲ್ಲಿ ಮುಳುಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ನೂತನವಾಗಿ ನಿರ್ಮಿಸಿರುವ ಸಿದ್ದರಾಮಯ್ಯ ಸೇತುವೆಯನ್ನು ಕಳೆದ ಸೋಮವಾರವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದರು.
ನಾಪತ್ತೆಯಾಗಿರುವ ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯ ಪೊಲೀಸರು ಹಾಗೂ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದ್ದು, ನಾಪತ್ತೆಯಾದ ವ್ಯಕ್ತಿಗಾಗಿ ತೀವ್ರ ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ. ಎನ್.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Youth goes missing in Bhadra river backwaters
Leave a comment