Home namma chikmagalur chikamagalur ಚೆನ್ನಮ್ಮ ಅವರ ನಿಧನಕ್ಕೆ ವೈಎಸ್‌ವಿ ದತ್ತ ತೀವ್ರ ಕಂಬನಿ
chikamagalurHomeLatest Newsnamma chikmagalur

ಚೆನ್ನಮ್ಮ ಅವರ ನಿಧನಕ್ಕೆ ವೈಎಸ್‌ವಿ ದತ್ತ ತೀವ್ರ ಕಂಬನಿ

Share
Share

ಚಿಕ್ಕಮಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ಅವರ ಕುಟುಂಬದ ಆಪ್ತ, ಮಾಜಿ ಶಾಸಕ ವೈಎಸ್‌ವಿ ದತ್ತ ತೀವ್ರ ಕಂಬನಿ ಮಿಡಿದಿದ್ದಾರೆ.

ಕಡೂರಿನಲ್ಲಿ ಮಾಧ್ಯಮಗಳೊಂದಿಗೆ ಭಾವುಕರಾಗಿ ಮಾತನಾಡಿದ ಅವರು, ಚೆನ್ನಮ್ಮ ಅವರ ಮುಗ್ಧತೆ, ದಾಂಪತ್ಯ ಮತ್ತು ಅವರ ಧಾರ್ಮಿಕ ಬದುಕಿನ ಹಲವು ರೋಚಕ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಚೆನ್ನಮ್ಮ ಅವರ ಸಾವಿನ ಕುರಿತು ಜ್ಯೋತಿಷಿಗಳು ಈ ಹಿಂದೆ ನುಡಿದಿದ್ದ ಭವಿಷ್ಯವೊಂದು ಈಗ ನಿಜವಾಗಿರುವ ಮಾಹಿತಿ ನೀಡಿದ್ದಾರೆ.

ಚೆನ್ನಮ್ಮ ಅವರ ನಿಧನದ ಕುರಿತು ಮಾತನಾಡುತ್ತಾ ವೈ.ಎಸ್.ವಿ. ದತ್ತ ಅವರು, ಚೆನ್ನಮ್ಮನವರಿಗೆ ಮುತ್ತೈದೆ ಸಾವು ಬರಲಿದೆ ಎಂದು ಹಿಂದೆ ಜ್ಯೋತಿಷಿಗಳು ಭವಿಷ್ಯ ನುಡಿದಿದ್ದರು.ಇಂದು ಅದೇ ರೀತಿ ದೇವೇಗೌಡರ ಸಮ್ಮುಖದಲ್ಲೇ ಅವರು ಮುತ್ತೈದೆಯಾಗಿಯೇ ಕಣ್ಣು ಮುಚ್ಚಿದ್ದಾರೆ. ಜ್ಯೋತಿಷಿಗಳು ಅಂದು ಹೇಳಿದ್ದ ಮಾತು ಇಂದು ಅಕ್ಷರಶಃ ನಿಜವಾಗಿದೆ ಎಂದಿದ್ದಾರೆ. ಅಲ್ಲದೆ ಶನಿವಾರ ಮಧ್ಯಾಹ್ನ ತಾವೇ ಖುದ್ದಾಗಿ ದೇವೇಗೌಡರನ್ನು ಭೇಟಿಯಾದಾಗ, ಸಂಜೆ ಹೊತ್ತಿಗೆ ಚೆನ್ನಮ್ಮನವರ ಆರೋಗ್ಯ ಸರಿಯಾಗಬಹುದು ಎಂದು ಗೌಡರು ಆಶಾಭಾವನೆ ವ್ಯಕ್ತಪಡಿಸಿದ್ದರು ಎಂದಿದ್ದಾರೆ.

ಚೆನ್ನಮ್ಮ ಅವರೊಂದಿಗಿನ ತಮ್ಮ ಒಡನಾಟವನ್ನು ನೆನೆದ ದತ್ತ, ಅವರ ನಿಧನದಿಂದ ನನಗೆ ನನ್ನ ಸ್ವಂತ ತಾಯಿಯನ್ನೇ ಕಳೆದುಕೊಂಡಷ್ಟು ದುಃಖವಾಗಿದೆ. ನಾನು ಒಂದೆರಡು ತಿಂಗಳು ಬೆಂಗಳೂರಿನ ಅವರ ಮನೆಗೆ ಹೋಗದಿದ್ದರೆ ಸಾಕು, ತಾವೇ ಖುದ್ದಾಗಿ ಫೋನ್ ಮಾಡಿ ಮನೆಗೆ ಬರಲು ಹೇಳುತ್ತಿದ್ದರು. ಮನೆಗೆ ಹೋದ ತಕ್ಷಣ ‘ಯಾಕೋ ಇಷ್ಟು ದಿನ ಬರಲಿಲ್ಲ?’ ಎಂದು ಪ್ರೀತಿಯಿಂದಲೇ ಗದರುತ್ತಿದ್ದರು. ಕೆಲವೊಮ್ಮೆ ‘ಗೌಡರಿಗೆ ಜ್ವರ ಬಂದಿದೆ, ಸ್ವಲ್ಪ ಮಂಕಾಗಿದ್ದಾರೆ. ನೀನು ಬಂದರೆ ಅವರು ಹುಷಾರಾಗುತ್ತಾರೆ, ತಕ್ಷಣ ಬಾ’ ಎಂದು ನನ್ನನ್ನು ಕರೆಯುತ್ತಿದ್ದರು” ಎಂದಿದ್ದಾರೆ.

ರಾಜಕೀಯದಲ್ಲಿ ಎಚ್.ಡಿ. ದೇವೇಗೌಡರನ್ನು ಹೆದರಿಸಲು ಯಾರಿಂದಲೂ ಸಾಧ್ಯವಿರಲಿಲ್ಲ. ಆದರೆ, ಮನೆಯಲ್ಲಿ ಮಾತ್ರ ಹಬ್ಬ ಹರಿದಿನ ಬಂದರೆ ಸಾಕು, ಗೌಡರು ಚೆನ್ನಮ್ಮನವರ ಜೊತೆ ಮೌನವಾಗಿ ಉಪವಾಸ ಕೂರಬೇಕಿತ್ತು. ಅಷ್ಟರಮಟ್ಟಿಗೆ ಗೌಡರ ಮೇಲೆ ಅವರಿಗೆ ಅಧಿಕಾರವಿತ್ತು. ಚೆನ್ನಮ್ಮನವರ ಇಡೀ ಜಗತ್ತೇ ದೇವೇಗೌಡರಾಗಿದ್ದರು. ಸದಾ ಪೂಜೆ, ಪುನಸ್ಕಾರ, ಉಪವಾಸ ಎಂದು ಕಳೆಯುತ್ತಿದ್ದ ಅಪ್ಪಟ ದೈವಭಕ್ತೆ ಅವರಾಗಿದ್ದರು. ದೇವಸ್ಥಾನಗಳಲ್ಲಿ ಅರ್ಚನೆ ಮಾಡಿಸುವಾಗ ಇಡೀ ದೊಡ್ಡಮನೆ ಕುಟುಂಬದ ಎಲ್ಲ ಸದಸ್ಯರ ರಾಶಿ, ನಕ್ಷತ್ರ, ಕುಲ ಮತ್ತು ಗೋತ್ರಗಳನ್ನು ಪಟಪಟನೆ ಹೇಳುತ್ತಿದ್ದರು. ಅದನ್ನು ಕೇಳಿ ದೇವಸ್ಥಾನದ ಅರ್ಚಕರೆ ಅಚ್ಚರಿಪಡುತ್ತಿದ್ದರು ಎಂದು ದತ್ತ ನೆನಪಿಸಿಕೊಂಡಿದ್ದಾರೆ.

ಮಾಜಿ ಪ್ರಧಾನಿ ಪತ್ನಿಯಾಗಿದ್ದರೂ ಅವರಲ್ಲಿ ಲವಲೇಶವೂ ಹಮ್ಮು-ಬಿಮ್ಮು ಇರಲಿಲ್ಲ ಎಂದ ದತ್ತ, ಅವರ ಸರಳತೆಗೆ ಸಾಕ್ಷಿಯಾದ ಘಟನೆಯೊಂದನ್ನು ನೆನಪಿಸಿಕೊಂಡರು. 1983ರಲ್ಲಿ ದೇವೇಗೌಡರು ಮಂತ್ರಿಯಾದಾಗ ಬೆಂಗಳೂರಿನಲ್ಲಿ ಸರ್ಕಾರಿ ಬಂಗಲೆ ಸಿಕ್ಕಿತ್ತು. ಹಾಸನದಿಂದ ಬರುವಾಗ ಚೆನ್ನಮ್ಮನವರು ತಮ್ಮ ನೆಚ್ಚಿನ ಹಸುಗಳನ್ನೂ ಬೆಂಗಳೂರಿಗೆ ತಂದಿದ್ದರು. ಅಷ್ಟೇ ಅಲ್ಲ, ಆ ಐಷಾರಾಮಿ ಸರ್ಕಾರಿ ಬಂಗಲೆಯ ಹಿಂಭಾಗದಲ್ಲೇ ಕೊಟ್ಟಿಗೆ ಕಟ್ಟಿಸಿ ಹಸುಗಳನ್ನು ಸಾಕಿದ್ದರು. ಬಟ್ಟೆ, ಸೀರೆ, ಒಡವೆಗಳ ಮೇಲೆ ಅವರಿಗೆ ಯಾವುದೇ ವ್ಯಾಮೋಹವಿರಲಿಲ್ಲ. ಅವರು ಕೊನೆವರೆಗೂ ಅಪ್ಪಟ ಹಳ್ಳಿ ಹೆಣ್ಣುಮಗಳಾಗಿಯೇ ಬದುಕಿದರು ಎಂದಿದ್ದಾರೆ.

ಒಮ್ಮೆ ದೇವೇಗೌಡರು ತಮಗೆ ನಜೀರ್ ಸಾಬ್ ಅವರ ಮನೆಯ ಪಾಯಸ ತುಂಬಾ ಇಷ್ಟ ಎಂದು ಹೇಳಿದ್ದರಂತೆ. ಇದನ್ನು ನೆನಪಿನಲ್ಲಿಟ್ಟುಕೊಂಡ ಚೆನ್ನಮ್ಮನವರು, ನಜೀರ್ ಸಾಬ್ ಅವರ ಮನೆಯ ಅಡುಗೆ ಭಟ್ಟನನ್ನು ತಮ್ಮ ಮನೆಗೆ ಕರೆಸಿಕೊಂಡು, ಅವರಿಂದ ಪಾಯಸ ಮಾಡುವುದನ್ನು ಕಲಿತು ಸ್ವತಃ ತಾವೇ ತಯಾರಿಸಿ ದೇವೇಗೌಡರಿಗೆ ಬಡಿಸಿದ್ದರು! ಇನ್ನು ತಮ್ಮ ಮೇಲಿದ್ದ ಪ್ರೀತಿಯನ್ನು ನೆನೆದ ದತ್ತ, ನನ್ನ ಮಗಳ ಮದುವೆಗೆ ಬರಲು ಅವರಿಗೆ ಸಾಧ್ಯವಾಗಿರಲಿಲ್ಲ. ಆ ಬೇಸರದಲ್ಲೇ ಒಂದು ದಿನ ಬೆಂಗಳೂರಿನಲ್ಲಿ ಯಾರಿಗೂ ಹೇಳದೆ, ಕೇವಲ ಡ್ರೈವರ್‌ ಕರ್ಕೊಂಡು ಸೀದಾ ಕಡೂರಿನಲ್ಲಿದ್ದ ನಮ್ಮ ಮನೆಗೆ ಬಂದು ಸರ್ಪ್ರೈಸ್ ನೀಡಿದ್ದರು” ಎಂದು ಚೆನ್ನಮ್ಮ ಅವರ ಅಪರೂಪದ ಗುಣಗಳನ್ನು ವೈ.ಎಸ್.ವಿ. ದತ್ತ ಕೊಂಡಾಡಿದ್ದಾರೆ.

YSV expresses deep sorrow over Chennamma’s demise

Share

Leave a comment

Leave a Reply

Your email address will not be published. Required fields are marked *

Don't Miss

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಗತಿ: 9.20 ಲಕ್ಷ ಗಣತಿ ನಮೂನೆಗಳ ವಿತರಣೆ

ಚಿಕ್ಕಮಗಳೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (Special Intensive Revision – SIR) ಕಾರ್ಯವು ಚಿಕ್ಕಮಗಳೂರು ಜಿಲ್ಲೆಯಲ್ಲಿ ವೇಗವಾಗಿ ಸಾಗುತ್ತಿದೆ. ಜಿಲ್ಲೆಯ ಒಟ್ಟು 9,60,231 ಮತದಾರರಿಗೆ...

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ ನಾಯಕರುಗಳು,ಮುಖಂಡರು ಮತ್ತೆ ಜನ ಕೂಡ ಮತ್ತೆ, ಮತ್ತೆ ಬೇಲಿ ಹಾರುವ ಚಾಳಿಗೆ ಒಗ್ಗಿಹೋಗುತ್ತಿದ್ದಾರೆ.ಒಟ್ಟಾರೆ ಅಧಿಕಾರ...

Related Articles

2023ರ ಬೆಟ್ಟಿಂಗ್ ದಂಧೆಯಲ್ಲಿ ಸಿ.ಟಿ.ರವಿ-ತಮ್ಮಯ್ಯ ಕಿಂಗ್ – ಪಿನ್ ಗಳಾ ?

ಚಿಕ್ಕಮಗಳೂರು: ಕ್ರಿಕೆಟ್ ಬೆಟ್ಟಿಂಗ್ ಅಪ್ ಗಳು ನಾಯಿ ಕೊಡೆಗಳಂತೆ ದಿನವೂ ಬೆಳೆಯಿತ್ತಿವೆ.ಇದಕ್ಕೆ ಮುಖ್ಯವಾಗಿ ಕ್ರಿಕೆಟ್ ಕೇಜ್...

ಪ್ರಾಣೇಶ್ ಗೆ ತಿಂಗಳ “ಕುರ್ಚಿ ? ಉಳಿದ ಅವಧಿ ಗಾಯಿತ್ರಿಗೆ ಗ್ಯಾರಂಟಿ ?

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಆಕ್ರಮ ನಡೆದಿದೆ ಎಂದು ಕಳೆದ...

ಅಕ್ರಮ ಹಣ ವರ್ಗಾವಣೆ ಪ್ರಕರಣದ ಸಮಗ್ರ ತನಿಖೆಗೆ ಶಾಸಕ ಹೆಚ್.ಡಿ. ತಮ್ಮಯ್ಯ ಮನವಿ

ಚಿಕ್ಕಮಗಳೂರು: ಕ್ರಿಕೆಟ್ ಬೆಟ್ಟಿಂಗ್ ಕಿಂಗ್ ಪಿನ್‌ಗಳು ಯಾರ್‍ಯಾರು, ಅವರೆಲ್ಲರೂ ಯಾರ ಮನೆಯಲ್ಲಿದ್ದವರು. ಬೆಟ್ಟಿಂಗ್ ದುಡ್ಡಲ್ಲಿ ಇವರು...

ಸ್ಕೌಟ್ಸ್‌ನ ಗುಣಾತ್ಮಕ ವಿಚಾರಗಳನ್ನು ಮಕ್ಕಳಿಗೆ ಪರಿಚಯಿಸಬೇಕು

ಚಿಕ್ಕಮಗಳೂರು: ಸ್ಕೌಟ್ಸ್‌ನ ಗುಣಾತ್ಮಕ ವಿಚಾರಗಳನ್ನು ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿ ಗಳಿಗೆ ಪರಿಚಯಿಸುವ ಕಾರ್ಯ ಶಿಕ್ಷಕರು ಮಾಡಬೇಕು....